- Advertisement -
ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕೇಂದ್ರ ಬಜೆಟ್ ಬಗ್ಗೆ ನಾನು ಏನು ನಿರೀಕ್ಷೆ ಮಾಡೋದಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಕೊಡುತ್ತೇನೆಂದು ಬಜೆಟ್ ನಲ್ಲಿ ಘೋಷಣೆ ಮಾಡಿದ್ರು. ಒಂದು ರೂಪಾಯಿ ಹಣ ಕೊಟ್ಟಿಲ್ಲ. ಹೀಗಾಗಿ ನಾನು ಏನನ್ನೂ ನಿರೀಕ್ಷೆ ಮಾಡಲ್ಲ. ಹಿಂದಿನ ಬಜೆಟ್ಗಳಲ್ಲಿ ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ನಾಲ್ಕು ಲಕ್ಷ ಕೋಟಿ ತೆರಿಗೆ ಕೊಡುತ್ತೇವೆ. ಕೇವಲ 68 ಸಾವಿರ ಕೋಟಿ ನಮಗೆ ವಾಪಾಸ್ ಕೊಡುತ್ತಾರೆ. ನಬಾರ್ಡ್ ನಲ್ಲಿ ಶೇ.58 ಹಣ ಕಡಿತ ಮಾಡಿದ್ದಾರೆ. ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎನ್ನುವುದು ಸಿದ್ದರಾಮಯ್ಯ ಅವರ ಬೇಸರದ ನುಡಿ.
- Advertisement -



