ಪರ್ಪಲ್ ಕ್ಯಾಪ್ ಗಾಗಿ ಜೋಶ್ ಪೈಪೋಟಿ
ಈ ಸೀಸನ್ ನಲ್ಲಿ ಜೋಶ್ ಹ್ಯಾಝಲ್ವುಡ್ RCB ತಂಡದ ಪ್ರಮುಖ ಬೌಲರ್ ಆಗಿ ಮೂಡಿಬಂದಿದ್ದಾರೆ. ಅವರು ಈ ಸೀಸನ್ ನಲ್ಲಿ ಆಡಿರುವ 10 ಇನ್ನಿಂಗ್ಸ್ಗಳಲ್ಲಿ 8.44 ರ ಎಕಾನಮಿ ದರದಲ್ಲಿ 18 ವಿಕೆಟ್ಗಳನ್ನು ಪಡೆದಿದ್ದಾರೆ. ಹೀಗಾಗಿ CSK ವಿರುದ್ಧದ ಪಂದ್ಯದಲ್ಲಿ ಹ್ಯಾಝಲ್ವುಡ್ ಬದಲಿಗೆ ಆಡಿದ ಲುಂಗಿ ಎನ್ಗಿಡಿ ಮೂರು ವಿಕೆಟ್ಗಳನ್ನು ಪಡೆದರೂ, ಹ್ಯಾಝಲ್ವುಡ್ ವಾಪಸಾದ ಕಾರಣ ಅವರು ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ. ಜೋಶ್ ಹ್ಯಾಜಲ್ ವುಡ್ ಅವರು ಪರ್ಪಲ್ ಕ್ಯಾಪ್ ಗಾಗಿ ಕರ್ನಾಟಕದವರೇ ಆದ ಗುಜರಾತ್ ಟೈಟಾನ್ಸ್ ತಂಡದ ಪ್ರಸಿದ್ಧ್ ಕೃಷ್ಣ(20 ವಿಕೆಟ್) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ನೂರ್ ಅಹ್ಮದ್ ಅವರ ಜೊತೆ ಪೈಪೋಟಿಗೆ ಬಿದ್ದಿದ್ದಾರೆ.
ರಜತ್ ಪಾಟೀದಾರ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮೇ 9 ರಂದು ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ಮಹತ್ವದ ಪಂದ್ಯವನ್ನು ಆಡಲಿದೆ. LSG ಆರು ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ. ಹೀಗಾಗಿ LSG ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. RCB ತಂಡವು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಇದ್ದು ಈ ಪಂದ್ಯವನ್ನು ಗೆದ್ದಲ್ಲಿ ಪ್ಲೇಆಫ್ ಸ್ಥಾನವನ್ನು ಖಚಿತಗೊಳ್ಳಲಿದೆ. ಇಲ್ಲವಾದಲ್ಲಿ ಇನ್ನುಳಿದ 2 ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದರಾಗಲಿದೆ.
ಪಡಿಕ್ಕಲ್ ಬದಲು ಅಗರ್ವಾಲ್
ಇನ್ನು ಆರ್ ಸಿಬಿ ತಂಡದ ಸ್ಟಾರ್ ಬ್ಯಾಟರ್ ದೇವದತ್ ಪಡಿಕ್ಕಲ್ ಗಾಯದ ಸಮಸ್ಯೆಯಿಂದಾಗಿ ಈ ಸೀಸನ್ ನ ಉಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಬಲಗಾಲಿನ ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ಅವರ ಬದಲಿಗೆ ಮಯಾಂಕ್ ಅಗರ್ವಾಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಫ್ರಾಂಚೈಸಿ ಪ್ರಕಟಿಸಿದೆ. ಕರ್ನಾಟಕ ರಣಜಿ ತಂಡದ ನಾಯಕರಾಗಿರುವ ಮಯಾಂಕ್ ಅಗರ್ವಾಲ್ ಅವರನ್ನು RCB ಒಂದು ಕೋಟಿ ರೂಪಾಯಿಗೆ ಖರೀದಿಸಿದೆ. ದೇವದತ್ ಪಡಿಕ್ಕಲ್ ಈ ಸೀಸನನ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದು, ಎರಡು ಅರ್ಧ ಶತಕಗಳನ್ನು ಒಳಗೊಂಡಂತೆ 247 ರನ್ ಕಲೆ ಹಾಕಿದ್ದಾರೆ.